ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಕಾಲಾವಧಿ ಜಾತ್ರೆ, ಮಖೆ ಜಾತ್ರೆ ಮತ್ತು ಉತ್ಸವಾದಿಗಳ ಸಲುವಾಗಿ ಹೊರೆಕಾಣಿಕೆ ಮೆರವಣಿಗೆ ಫೆ. 12ರಂದು
ನಡೆಯಿತು.
ಉಪ್ಪಿನಂಗಡಿ, ಕಜೆಕ್ಕಾರು ಬೀಡು, ದುರ್ಗಾಗಿರಿ, 34-ನೆಕ್ಕಿಲಾಡಿ, ಬೆಳ್ಳಿಪ್ಪಾಡಿ ಮೊದಲಾದ ಕಡೆಯಿಂದ ಬಂದ ಹೊರೆಕಾಣಿಕೆ ಉಪ್ಪಿನಂಗಡಿ ಹೊಟೇಲ್ ಆದಿತ್ಯ ಬಳಿ ಸೇರಿ ಅಲ್ಲಿಂದ ಮೆರವಣಿಗೆಯಲ್ಲಿ ತರಲಾಗಿ ದೇವಸ್ಥಾನಕ್ಕೆ ಸಮರ್ಪಿಸಲಾಯಿತು. ಮೆರವಣಿಗೆಯಲ್ಲಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ, ಸಮಿತಿ ಸದಸ್ಯರಾದ ಜಯಂತ ಪೊರೋಳಿ, ಹರಿರಾಮಚಂದ್ರ, ಹರಿಣಿ ಶೆಟ್ಟಿ, ಪ್ರೇಮಲತಾ, ದೇವಸ್ಥಾನ ಸಮಿತಿ ಮಾಜಿ ಸದಸ್ಯರಾದ ಕಂಗ್ವೆ ವಿಶ್ವನಾಥ ಶೆಟ್ಟಿ, ಸುಂದರ ಗೌಡ, ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಮುಳಿಯ, ಸದಸ್ಯರಾದ ಲೋಕೇಶ್ ಬೆತ್ತೋಡೆ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎನ್. ಉಮೇಶ್ ಶೆಣೈ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಾಮಚಂದ್ರ ಮಣಿಯಾಣಿ, ಚಂದ್ರಶೇಖರ ಮಡಿವಾಳ, ಸ್ಥಳೀಯ ಪ್ರಮುಖರಾದ ಇಂಜಿನಿಯರ್ ಸುಧಾಕರ್, ಚಂದಪ್ಪ ಮೂಲ್ಯ, ಕೈಲಾರ್ ರಾಜ್ಗೋಪಾಲ್ ಭಟ್, ಕೃಷ್ಣ ರಾಜ್, ಶಾಂತಾರಾಮ ಕಾಂಚನ ಮತ್ತಿತರರು ಉಪಸ್ಥಿತರಿದ್ದರು.
ಹೊರೆಕಾಣಿಕೆ ಮೆರವಣಿಗೆ ದೇವಸ್ಥಾನದ ಬಳಿ ಬರುತ್ತಿದ್ದಂತೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ, ಸಿಬ್ಬಂದಿಗಳಾದ ಪದ್ಮನಾಭ, ಕೃಷ್ಣ ಪ್ರಸಾದ್ ಬಡಿಲ ಇವರುಗಳು ಹೊರೆಕಾಣಿಕೆಯನ್ನು ದೇವಸ್ಥಾನಕ್ಕೆ ಬರಮಾಡಿಕೊಂಡರು.