ಪುತ್ತೂರು : ಕ್ಯಾಂಪ್ಕೋ ಮಂಗಳೂರು ವತಿಯಿಂದ “ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ” ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮ ಪುತ್ತೂರು ಕ್ಯಾಂಪ್ಕೋ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸದಸ್ಯ ಬೆಳ್ಳಿಪ್ಪಾಡಿ ಗ್ರಾಮದ ಕೋಡಿಮನೆ ಅಣ್ಣು ಗೌಡರವರ ತೆರೆದ ಹೃದಯ ಶಸ್ತ್ರಚಿಕಿತ್ಸೆಗಾಗಿ ಕ್ಯಾಂಪ್ಕೋ ವತಿಯಿಂದ ನೀಡಲಾದ ರೂ.51,882 ಮೊತ್ತದ ಚೆಕ್ನ್ನು ಸಂಸ್ಥೆಯ ನಿರ್ದೇಶಕ ರಾಘವೇಂದ್ರ ಭಟ್ರವರು ಹಸ್ತಾಂತರಿಸಿದರು.
ಕ್ಯಾಂಪ್ಕೋ ಸಂಸ್ಥೆಯ ಮುಖ್ಯ ಮಾರುಕಟ್ಟೆ ವ್ಯವಸ್ಥಾಪಕ ಗೋವಿಂದ ಭಟ್, ARDF ಮುಖ್ಯಸ್ಥ ಕೇಶವ ಭಟ್, ಕ್ಯಾಂಪ್ಕೋ ಪುತ್ತೂರು ಶಾಖೆಯ ಶಾಖಾಧಿಕಾರಿ ಶ್ರೀಧರ ಜಿ.ಪಿ, ಲೆಕ್ಕಪತ್ರ ವಿಭಾಗ ಮುಖ್ಯಸ್ಥೆ ಉಷಾ ಹಾಗೂ ಸಿಬ್ಬಂದಿ ವಗ೯ದವರು ಉಪಸ್ಥಿತರಿದ್ದರು.