ಪುತ್ತೂರು: ಕೆಲ ದಿನಗಳ ಹಿಂದೆ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪಡುವನ್ನೂರು ಗ್ರಾಮದ ಸಜಂಕಾಡಿ ನಿವಾಸಿ ಆಟೋ ರಿಕ್ಷಾ ಚಾಲಕ ವಿನಯ ಕುಮಾರ್(23ವ)ರವರು ಫೆ. 14ರಂದು ಮೃತಪಟ್ಟಿದ್ದಾರೆ.
ವಿನಯ ಕುಮಾರ್ ಅವರು ಕೆಲವು ದಿನಗಳ ಹಿಂದೆ ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರು ತಾಯಿ ಕಮಲ, ಸಹೋದರ ನವೀನ್ ಕುಮಾರ್ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.