ಪುಣಚ ನೀರುಮಜಲು ಬ್ರಹ್ಮ ಬೈದೆರ್ಕಳ ನೇಮೋತ್ಸವ

0

ಪುಣಚ: ಪುಣಚ ಗ್ರಾಮದ ನೀರುಮಜಲು ಶ್ರೀ ಕೋಟಿ ಚೆನ್ನಯ ಗರಡಿಯಲ್ಲಿ ವರ್ಷಂಪ್ರತಿ ನಡೆಯುವ ಶ್ರೀ ಬ್ರಹ್ಮ ಬೈದೆರ್ಕಳ ನೇಮೋತ್ಸವ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಫೆ :14 ರಂದು ನಡೆಯಿತು. ಫೆ : 13 ರಂದು ಬೆಳಿಗ್ಗೆ ನಾಗ ತಂಬಿಲ ರಾತ್ರಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕಾರ್ತಿಕ ಪೂಜೆ ನಡೆಯಿತು.

ಫೆ :14 ರಂದು ಬೆಳಿಗ್ಗೆ ಗಣಪತಿ ಹೋಮ, ಮಧ್ಯಾಹ್ನ ಶುದ್ಧ ಕಲಶಾದಿ ಹೋಮ, ತಂಬಿಲ ನಡೆದು ರಾತ್ರಿ ಶ್ರೀ ಬೈದರ್ಕಳ ಗರಡಿ ಇಳಿಯುವ ಕಾರ್ಯಕ್ರಮ, ಆಯುಧ ಒಪ್ಪಿಸುವುದು, ಮಾಯಂದಾಳ್ ದೇವಿಯ ಉತ್ಸವ, ಪೂಜಾರಿಗಳ ಸೇಟು, ಬೈದೆರ್ಕಳ ಸೇಟು ನಡೆದು ಫೆ 15 ರ ಮುಂಜಾನೆ ಪ್ರಸಾದ ವಿತರಣೆ ನಡೆಯಿತು. ಮಧ್ಯಾಹ್ನ ಮತ್ತು ರಾತ್ರಿ ಸಾವಿರಾರು ಭಕ್ತಾದಿಗಳಿಗೆ ಮಹಾ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಊರ ಹಾಗು ಪರ ಊರ ಭಕ್ತಾದಿಗಳು ಉಪಸ್ಥಿತರಿದ್ದರು. ಗರಡಿಯ ಆಡಳಿತ ಮೋಕ್ತೇಸರರುಗಳಾದ ಸಂಕಪ್ಪ ಪೂಜಾರಿ ನೀರುಮಜಲು, ಸೀತಾರಾಮ ಪೂಜಾರಿ ನೀರುಮಜಲು, ನಾರಾಯಣ ಪೂಜಾರಿ ನೀರುಮಜಲು ಅಥಿತಿಗಳನ್ನು ಭಕ್ತಾದಿಗಳನ್ನು ಸ್ವಾಗತಿಸಿದರು.

LEAVE A REPLY

Please enter your comment!
Please enter your name here