ಭ್ರಷ್ಟಾಚಾರ ವಿರುದ್ಧದ ‘ಸುದ್ದಿ’ಯ ಆಂದೋಲನಕ್ಕೆ ಬೆಂಬಲ ಸೂಚಿಸಿದ ಮುಂಡೂರು ಗ್ರಾಮ ಪಂಚಾಯತ್

0

ಪುತ್ತೂರು: ಸುದ್ದಿ ಜನಾಂದೋಲನ ವೇದಿಕೆ ವತಿಯಿಂದ ಹಮ್ಮಿಕೊಂಡಿರುವ ಲಂಚ, ಭ್ರಷ್ಟಾಚಾರ ವಿರೋಧಿ ಅಭಿಯಾನಕ್ಕೆ ಮುಂಡೂರು ಗ್ರಾಮ ಪಂಚಾಯತ್ ವತಿಯಿಂದ ಸಾಮಾನ್ಯ ಸಭೆಯಲ್ಲಿ ಬೆಂಬಲ ಸೂಚಿಸಿದ್ದಾರೆ.

ಭೆ ಫೆ.15ರಂದು ಮುಂಡೂರು ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು. ಭ್ರಷ್ಟಾಚಾರ ವಿಚಾರದಲ್ಲಿ ಸುದ್ದಿಯ ಹೋರಾಟ ಶ್ಲಾಘನೀಯವಾಗಿದ್ದು ಈ ಆಂದೋಲನಕ್ಕೆ ಜನ ಪ್ರತಿನಿಧಿಗಳು, ಅಧಿಕಾರಿಗಳು ಬೆಂಬಲ ನೀಡಿದ್ದಾರೆ. ನಮ್ಮ ಪಂಚಾಯತ್ ವತಿಯಿಂದಲೂ ಬೆಂಬಲ ಸೂಚಿಸಬೇಕಾಗಿದೆ ಎಂದು ಸದಸ್ಯ ಅಶೋಕ್ ಕುಮಾರ್ ಪುತ್ತಿಲ ಹೇಳಿದರು. ಅಧ್ಯಕ್ಷರು, ಸದಸ್ಯರು ಮತ್ತು ಅಧಿಕಾರಿಗಳು ಸಹಮತ ಸೂಚಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾ ಎನ್ ಅಧ್ಯಕ್ಷತೆ ವಹಿಸಿದ್ದರು. ಪಿಡಿಓ ಗೀತಾ ಬಿ. ಎಸ್ ಹಾಗೂ ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here