ಪುತ್ತೂರು: ಕೊಳ್ತಿಗೆ ಗ್ರಾಮ ಪಂಚಾಯತ್ನ 2021-22 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾಪಂ ಅಧ್ಯಕ್ಷ ಶ್ಯಾಮ್ಸುಂದರ್ ರೈಯವರ ಅಧ್ಯಕ್ಷತೆಯಲ್ಲಿ ಫೆ.15 ರಂದು ಪೆರ್ಲಂಪಾಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ.ಯವರು ಮಾರ್ಗದರ್ಶಿ ಅಧಿಕಾರಿಯಾಗಿ ಆಗಮಿಸಿದ್ದರು. ಸುದ್ದಿ ಜನಾಂದೋಲನ ವೇದಿಕೆ ಹಮ್ಮಿಕೊಂಡಿರುವ ಲಂಚ, ಭ್ರಷ್ಟಾಚಾರ ವಿರೋಧಿ ಅಭಿಯಾನಕ್ಕೆ ಗ್ರಾಮಸಭೆಯಲ್ಲಿ ಬೆಂಬಲ ಸೂಚಿಸಲಾಯಿತು. ಗ್ರಾಪಂ ಅಧ್ಯಕ್ಷ ಶ್ಯಾಮ್ಸುಂದರ ರೈಯವರು ಲಂಚ,ಭ್ರಷ್ಟಾಚಾರ ವಿರೋಧಿಸುವ ನಿಟ್ಟಿನಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿದರು. ಗ್ರಾಪಂ ಸದಸ್ಯರುಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಸುನೀಲ್ ಎಚ್.ಟಿ ಸ್ವಾಗತಿಸಿದರು. ಕಾರ್ಯದರ್ಶಿ ಶಾರದಾ ವಂದಿಸಿದರು. ಸಿಬ್ಬಂದಿಗಳು ಸಹಕರಿಸಿದ್ದರು.