ನಳೀಲು : ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾತ್ರೋತ್ಸವಕ್ಕೆ ಗೊನೆಮುಹೂರ್ತ

0

ಸವಣೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಹಾಗೂ ಕಾರಣಿಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಹಾಗೂ ಸತ್ಯನಾರಾಯಣ ಪೂಜೆ, ಪರಿವಾರ ದೈವಗಳ ನೇಮೋತ್ಸವ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.22 ಮತ್ತು ಫೆ 23 ರಂದು ನಡೆಯಲಿದೆ. ಇದರ ಪೂರ್ವಭಾವಿಯಾಗಿ ಫೆ.15ರಂದು ಗೊನೆ ಮುಹೂರ್ತ ನಡೆಯಿತು.

ಈ ಸಂದರ್ಭದಲ್ಲಿ ದೇವರಿಗೆ ಸಮರ್ಪಣೆಯ ಎಣ್ಣೆಯ ಡಬ್ಬಿಯನ್ನು ಅನಾವರಣಗೊಳಿಸಲಾಯಿತು. ದೇವಸ್ಥಾನದ ಅರ್ಚಕ ಹರಿನಾರಾಯಣ ಮನೋಳಿತ್ತಾಯ ಅವರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಈ ಸಂದರ್ಭ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು, ಮೊಕ್ತೇಸರರಾದ ಮೋಹನ್‌ದಾಸ್‌ ರೈ ನಳೀಲು, ಅರುಣ ಕುಮಾರ್ ರೈ, ಪ್ರವೀಣ್ ಕುಮಾರ್,ಸತೀಶ್ ರೈ ಸುರೇಶ್ಚಂದ್ರ ರೈ, ದೈವದ ಪರಿಚಾರಕರಾದ ಬಾಲಕೃಷ್ಣ ಗೌಡ ಪೂಜಾರಿಮನೆ, ಉದಯ, ಕೇಪು ಗೌಡ,ಮುಂಡಪ್ಪ ಪೂಜಾರಿ, ಜತ್ತಪ್ಪ ಪೂಜಾರಿ ಮೊದಲಾದವರಿದ್ದರು.

ದೇವಳದ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.22, 23ರಂದು ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಹಸಿರುವಾಣಿ ಸಮರ್ಪಣೆ ಫೆ.21ರಂದು ನಡೆಯಲಿದೆ.ಫೆ.22ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಶ ಪೂಜೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಬಳಿಕ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ದೈವಗಳ ಭಂಡಾರ ತೆಗೆದ ಬಳಿಕ ವಲ್ಮೀಕ ರೂಪಿ ಸುಬ್ರಹ್ಮಣ್ಯ ದೇವರಿಗೆ ರಂಗಪೂಜೆ ನಡೆಯಲಿದೆ. ಸಂಜೆ 7ರಿಂದ ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ಯಕ್ಷ-ಗಾನ-ವೈಭವ ನಡೆಯಲಿದೆ. ಫೆ.23ರಂದು ಪ್ರಾತಃಕಾಲ ವ್ಯಾಘ್ರ ಚಾಮುಂಡಿಯ ನೇಮೋತ್ಸವ, ಬೆಳಿಗ್ಗೆ ರುದ್ರ ಚಾಮುಂಡಿಯ ನೇಮೋತ್ಸವ ಗುಳಿಗ ದೈವಕ್ಕೆ ತಂಬಿಲ ಸೇವೆ ನಡೆಯಲಿದೆ.

LEAVE A REPLY

Please enter your comment!
Please enter your name here