ಜ್ಞಾನ ರೈಗೆ ಸಿದ್ದಗಂಗಾಶ್ರೀ ಸದ್ಬಾವನಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

0

ಪುತ್ತೂರು: ಪುತ್ತೂರಿನ ಬಹುಮುಖ ಪ್ರತಿಭೆ ಕು. ಜ್ಞಾನ ರೈ ಕುರಿಯರವರಿಗೆ ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ‘ಸಿದ್ದಗಂಗಾಶ್ರೀ ಸದ್ಬಾವನಾ ರಾಷ್ಟ್ರೀಯ ಪ್ರಶಸ್ತಿ’ ಪ್ರದಾನ‌ ಮಾಡಿ ಗೌರವಿಸಲಾಯಿತು.

 


ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ, ನಾಡೋಜ ಡಾ. ಮನು ಬಳಿಗಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಸಿದ್ಧಗಂಗಾ ಶಿವಯೋಗಿ ತ್ರಿವಿಧ ದಾಸೋಹಿ ಪುಣ್ಯ ಸ್ಮರಣಾರ್ಥ ‘ಸಿದ್ದಗಂಗಾ ಶ್ರೀ ನೆನಪು ಸ್ಮರಣ ಸಂಚಿಕೆ’ ಬಿಡುಗಡೆ ಹಾಗೂ ‘ರಾಷ್ಟ್ರೀಯ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಜ್ಞಾನ ರೈ ಕುರಿಯರವರಿಗೆ ಬೆಂಗಳೂರು ಶ್ರೀ ಬೇಲಿಮಠ ಮಹಾಸಂಸ್ಥಾನದ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿ, ಗದಗ ಗಜೇಂದ್ರಗಡ ಕೋಡಿಮಠ ಸಂಸ್ಥಾನದ ಡಾ. ಶ್ರೀ ಕಾಲಜ್ಞಾನ ಬ್ರಹ್ಮ ಸದ್ಗುರು ಶ್ರೀ ಶರಣಬಸವ ಮಹಾಸ್ವಾಮಿ, ಶಿವಮೊಗ್ಗದ ಶ್ರೀ ದೂರ್ವಾಸ ಕ್ಷೇತ್ರ ಜಾತವೇದ ಸುಕ್ಷೇಮಾಲಯದ ಶ್ರೀ ಪಲ್ಲಕ್ಕಿ ನಾರಾಯಣಸ್ವಾಮಿ, ಸಾಹಿತಿಗಳೂ, ಚಿಂತಕರೂ ಆಗಿರುವ ಡಾ. ಕೆ.ಪಿ.ಪುತ್ತೂರಾಯ, ಪತ್ರಕರ್ತರೂ, ಕರ್ನಾಟಕ ಜನತಾ ಸೇನಾದಳದ ರಾಜ್ಯಾಧ್ಯಕ್ಷರೂ ಆಗಿರುವ ಹೆಚ್. ಸದಾಶಿವರವರು ಜ್ಞಾನ ರೈಯವರಿಗೆ ‘ಸಿದ್ಧಗಂಗಾ ಶ್ರೀ ಸದ್ಭಾವನ’ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿ ಸನ್ಮಾನಿಸಿದರು.

ಆದಿ ಗ್ರಾಮೋತ್ಸವ ಪ್ರತಿಭಾ ಸಿರಿ ಗೌರವ ಪ್ರಶಸ್ತಿ, ಸುದ್ದಿ ಬಿಡುಗಡೆಯ ಪ್ರತಿಭಾ ದೀಪ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿ ಪುರಸ್ಕೃತೆಯಾಗಿರುವ ಬಾಲಪ್ರತಿಭೆ ಜ್ಞಾನ ರೈ ಕುರಿಯರವರು ಈಗಾಗಲೇ ಹಲವಾರು ಕಿರುಚಿತ್ರ ಹಾಗೂ ಆಲ್ಬಂ ಸಾಂಗ್ ಗಳಲ್ಲಿ ನಟಿಸುವ ಮೂಲಕ ಗಮನ ಸೆಳೆದಿದ್ದಾರೆ. ನೃತ್ಯ, ಅಭಿನಯ ಮಾತ್ರವಲ್ಲದೆ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲೂ ಪ್ರಶಸ್ತಿ ಪಡೆದುಕೊಂಡಿರುವ ಜ್ಞಾನರವರು ಹಲವಾರು ಫೋಟೋ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ವಿಜೇತರಾಗಿದ್ದು ಜಾಹೀರಾತಿನಲ್ಲೂ ನಟಿಸುತ್ತಿದ್ದಾರೆ. ಧಾರ್ಮಿಕ ಶಿಕ್ಷಣದತ್ತ ಒಲವು ತೋರಿರುವ ಇವರು ಕೂಡ್ಲಿಗಿಯ ಗುರುದೇವ ಗುರುಕುಲದ ಶಶಿಧರ್ ಗುರೂಜಿಯವರಿಂದ ಭಗವದ್ಗೀತೆ ಪಠಣ, ನಿತ್ಯ ಶ್ಲೋಕಗಳು, ಅಬಾಕಸ್, ಗಾಂಧಾರಿ ವಿದ್ಯೆ ಕಲಿತಿದ್ದಾರೆ.

ಪ್ರಸ್ತುತ ಭರತನಾಟ್ಯ, ಸಂಗೀತ, ಯಕ್ಷಗಾನ, ಕರಾಟೆ, ಯೋಗ, ಅಭ್ಯಾಸದಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಹನ್ನೊಂದರ ಹರೆಯದ ಜ್ಞಾನ ರೈ ಕುರಿಯರವರು ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದು ಉದ್ಯಮಿ ಜಯರಾಮ ರೈ ಕುರಿಯ ಮತ್ತು ಸುದ್ದಿ ಚಾನೆಲ್ ನಿರೂಪಕಿ ಹೇಮಾ ಜಯರಾಮ್ ಅವರ ಪುತ್ರಿ.

LEAVE A REPLY

Please enter your comment!
Please enter your name here