ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ಸುಳ್ಯ ಬಿ.ಜೆ.ಪಿ. ಕಚೇರಿಯಲ್ಲಿ ಕಾರ್ಯನಿರ್ವಹಣಾ ತಂಡದ ಸಭೆ ನಡೆಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಭಾಗವಹಿಸಿದರು.ಸುಳ್ಯ ಮಂಡಲ ಬಿ.ಜೆ.ಪಿ. ಅಧ್ಯಕ್ಷ ಹರೀಶ್ ಕಂಜಿಪಿಲಿ ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ್ ರೈ ಕೆಡೆಂಜಿ, ಸುಬೋಧ್ ಶೆಟ್ಟಿ ಮೇನಾಲ, ದ.ಕ. ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ ಹಾಗೂ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.