ಬೊಳ್ಳಾಜೆ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ, ಶಾರದಾಪೂಜೆ, ಅಕ್ಷರಾಭ್ಯಾಸ

0

 

 

ಬೊಳ್ಳಾಜೆ ಶ್ರೀ ಶಾರದಾ ಅನುದಾನಿತ ಹಿರಿಯ
ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ, ಶಾರದಾ ಪೂಜೆ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮವು ಇಂದು ನಡೆಯಿತು.
ಗಾಂಧಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ವಾಸುದೇವ ಹೈದಂಗೂರು ವಹಿಸಿದ್ದರು. ‌ಮುಖ್ಯ ಅತಿಥಿಗಳಾಗಿ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಅನಂತ ಭಟ್ ಕನಿಯಾಲ, ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ಯಾಮಲಾ ಎ.ವಿ., ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ ಕೊರತ್ತೋಡಿ ಹಾಗೂ ಮುಖ್ಯೋಪಾಧ್ಯಾಯ ಗಿರಿಯಪ್ಪರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ಸೀತಾರಾಮ ಸಿ.ಎನ್.‌ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಸುಚಿತ್ರಾ ಬೊಳ್ಳಾಜೆ ವಂದಿಸಿದರು. ಬಳಿಕ ಶಾರಾದಾ ಪೂಜೆ, ಅಕ್ಷರಾಭ್ಯಾಸ ನಡೆಯಿತು.
ಶಾರದ ಪೂಜೆಯನ್ನು ಅನಂತ ಭಟ್ ರವರು ದೀಪ ಬೆಳಗಿಸಿ ಚಾಲನೆ ನೀಡಿದರು. ಶಾರದ ಪೂಜೆಯ ಪ್ರಯುಕ್ತ ಭಜನಾ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here