ಸುಳ್ಯ : ಎಡಮಂಗಲ ಗ್ರಾ.ಪಂ.ನಲ್ಲಿ ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಫೆ.19ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಕಡಬ ತಹಶಿಲ್ದಾರ್ ಅನಂತ ಶಂಕರ್ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿದ್ದರು. ಎಡಮಂಗಲ ಗ್ರಾ.ಪಂ.ಅಧ್ಯಕ್ಷೆ ಸುಮಾ ನೂಚಿಲ, ಉಪಾಧ್ಯಕ್ಷೆ ರೇವತಿ ಕೆ, ತಾ.ಪಂ. ವ್ಯವಸ್ಥಾಪಕ ಆನಂದ ಎ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ಸ್ವಾಗತಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭವ್ಯ ವಂದಿಸಿದರು. ಗ್ರಾ.ಪಂ. ಸಿಬ್ಬಂದಿ ಗೋಪಿನಾಥ್ ಕಾರ್ಯಕ್ರಮ ನಿರೂಪಿಸಿದರು. ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದು ಗ್ರಾಮಸ್ಥರ ಅಹವಾಲುಗಳನ್ನು ಸ್ವೀಕರಿಸಿದರು.