ನೆಲ್ಯಾಡಿ: ನೆಲ್ಯಾಡಿ ಗ್ರಾಮದ ಕುಡ್ತಾಜೆಯಲ್ಲಿ ಸಂಭವಿಸಿದ ಬೆಂಕಿ ಅನಾಹುತದಿಂದಾಗಿ ಅಡಿಕೆ, ಗೇರು ಹಾಗೂ ತೆಂಗಿನ ಗಿಡಗಳು ಬೆಂಕಿಗಾಹುತಿಯಾಗಿರುವ ಘಟನೆ ಫೆ.20ರಂದು ನಡೆದಿದೆ.
ಖಾಸಗಿ ವ್ಯಕ್ತಿಯೋರ್ವರ ಜಾಗಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಜಾಗದಲ್ಲಿದ್ದ ಅಡಿಕೆ,ಗೇರು ಹಾಗೂ ತೆಂಗಿನ ಗಿಡಗಳು ಬೆಂಕಿಗಾಹುತಿಯಾಗಿ ಅಪಾರ ನಷ್ಟ ಸಂಭವಿಸಿದೆ. ಸ್ಥಳೀಯರ ಸಹಕಾರದೊಂದಿಗೆ ಅಗ್ನಿಶಾಮಕದಳದವರು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.