ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಶ್ರಾವ್ಯ ನಿಧನ

0

ಪುತ್ತೂರು : ಇಲಿಪಾಷಾಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಿ.ಯು.ಸಿ. ವಿದ್ಯಾರ್ಥಿನಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಬೇರಿಕೆ ನಿವಾಸಿ ರಮೇಶ ಎಂಬವರ ಪುತ್ರಿ, ಪುತ್ತೂರು ವಿವೇಕಾನಂದ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಶ್ರಾವ್ಯ (17ವ.)ರವರು ಮೃತಪಟ್ಟ ವಿದ್ಯಾರ್ಥಿನಿ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಇವರು ವಾರದ ಹಿಂದೆ ಮರ್ಕಂಜದ ಮನೆಗೆ ಬಂದಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ಇಲಿಪಾಷಣ ಸೇವಿಸಿದ್ದರು. ಬಳಿಕ ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಫೆ.20ರಂದು ಮೃತರಾಗಿದ್ದಾರೆಂದು ತಿಳಿದು ಬಂದಿದೆ. ವ್ಯಾಸಾಂಗ ಕಷ್ಟವಾಗುತ್ತಿದೆ ಎಂಬ ಕಾರಣಕ್ಕೆ ಇಲಿ ಪಾಷಾಣ ಸೇವಿಸಿರುವುದಾಗಿ ಆಕೆ ಹೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ತಂದೆ ರಮೇಶ್, ತಾಯಿ ವಿದ್ಯಾ, ಸಹೋದರ ಶ್ರೇಯಸ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here