ಪುತ್ತೂರು : ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ ಕುಮಾರ್ರವರಿಗೆ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ರವರು 73ನೇ ಹುಟ್ಟುಹಬ್ಬದ ಶುಭಾಶಯ ಸಲ್ಲಿಸಿದರು. ಫೆ.24ರಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಭವನದಲ್ಲಿ ನಡೆದ ಡಾ|ಎಂ.ಎನ್.ರಾಜೇಂದ್ರ ಕುಮಾರ್ರವರ 73ನೇ ಹುಟ್ಟುಹಬ್ಬದ ಅಂಗವಾಗಿ ನಡೆಸಲಾದ ಅಭಿನಂದನಾ ಸಮಾರಂಭದಲ್ಲಿ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ರವರು ಸಂಘದ ಪರವಾಗಿ ಹೂಗುಚ್ಛ ನೀಡಿ ಅಭಿನಂದಿಸಿದರು.
ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಹಿರಿಯ ನಿರ್ದೇಶಕ ಸುಭಾಷ್ ನಾಯಕ್, ಆಡಳಿತ ನಿರ್ದೇಶಕ ಗೋಪಾಲಕೃಷ್ಣ ಭಟ್, ಬಾಳಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.