ಪುತ್ತೂರು; ಸ್ಫೂರ್ತಿ ಯುವಕ ಮಂಡಲ, ಸ್ಫೂರ್ತಿ ಯುವತಿ ಮಂಡಲ ಹಾಗೂ ಸ್ಫೂರ್ತಿ ಬಾಲಸಭಾದ 32 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಲಂಚ, ಭ್ರಷ್ಟಾಚಾರದ ವಿರುದ್ಧದ ಸುದ್ದಿ ಜನಾಂದೋಲಕ್ಕೆ ಬೆಂಬಲ ಸೂಚಿಸಿ ಘೋಷಣೆ ಕೂಗಿದರು.
ಕಾರ್ಯಕ್ರಮದ ನಿರೂಪಕಿ ದೇವಿಕಾ ಘೋಷಣೆ ಕೂಗಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ನಗರ ಸಭಾ ಸದಸ್ಯೆ ಗೌರಿ ಬನ್ನೂರು, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ, ಸ್ಫೂರ್ತಿ ಯುವ ಸಂಸ್ಥೆಗಳ ಸಂಚಾಲಕ ದಿನೇಶ್ ಸಾಲಿಯಾನ್, ನಿರೂಪಕಿ, ಬರಹಗಾರ್ತಿ ರೇಣುಕಾ ಕಾಣಿಯೂರು, ಸಂಚಾರಿ ಠಾಣಾ ಉಪನಿರೀಕ್ಷಕ ರಾಮ ನಾಯ್ಕ, ಸ್ಫೂರ್ತಿ ಯುವಕ ಮಂಡಲದ ಅಧ್ಯಕ್ಷ ಸೂರ್ಯ ಕೋಟ್ಯಾನ್, ಸ್ಫೂರ್ತಿ ಮಹಿಳಾ ಮಂಡಲದ ಅಧ್ಯಕ್ಷೆ ಲಾವಣ್ಯ, ಕಾರ್ಯದರ್ಶಿಜ್ಯೋತಿ ನಾರಾಯಣ್, ಬಾಲಸಭಾದ ಅಧ್ಯಕ್ಷ ಗಣೇಶ್ ಹಾಗೂ ಸಭೆಯಲ್ಲಿ ನೂರಾರು ಮಂದಿ ಘೋಷಣೆ ಕೂಗಿದರು