ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಶಾಂತಿಸಭೆ
ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆಯು ಅ.7 ರಂದು ನಡೆಯಿತು.
ಠಾಣಾಧಿಕಾರಿ ಸುಹಾಸ್ ರವರು ಮಾತನಾಡಿ ಶಾಂತಿಯುತವಾಗಿ ಹಬ್ಬವನ್ನು ಆಚರಿಸಬೇಕು, ಹಬ್ಬವು ಉತ್ತಮವಾಗಿ ನಡೆಯಲಿ ಎಲ್ಲರೂ ಸಹಕಾರ ನೀಡಬೇಕು, ಅಹಿತಕರ ಘಟನೆಗಳು ನಡೆದಲ್ಲಿ ಕೂಡಲೇ ಠಾಣೆಗೆ ತಿಳಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ಮಸೀದಿಯ ಪ್ರಮುಖರು ಉಪಸ್ಥಿತರಿದ್ದರು.