ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರುರವರ ಪತ್ನಿ ಶ್ರೀಮತಿ ನೂತನರವರು ಇಂದು
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು,ಬಂದರು ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಎಸ್.ಅಂಗಾರರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾದರು.
ಬಳಿಕ ಮುಖ್ಯಮಂತ್ರಿಯವರ ಜೊತೆ ನೂತನರವರು ಮಾತನಾಡಿದರು.ನೂತನರವರನ್ನು ಉದ್ಯೋಗಕ್ಕೆ ತಕ್ಷಣ ಮಂಗಳೂರಿಗೆ ನಿಯೋಜಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ನೂತನರವರು ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ
ಬೆಳ್ಳಾರೆ ಬಿಜೆಪಿ ಮುಖಂಡ ಆರ್.ಕೆ.ಭಟ್ ಕುರುಂಬುಡೇಲು, ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ದಿ.ಪ್ರವೀಣ್ ಚಿಕ್ಕಪ್ಪ ಜಯರಾಮ ಕಾರ್ಯಾಡಿ, ಮಾವ ಲೋಕೇಶ್ ಪೂಜಾರಿ, ಭಾವ ರಂಜಿತ್, ನೂತನರ ತಮ್ಮ ಶಿವಪ್ರಸಾದ್ ಉಪಸ್ಥಿತರಿದ್ದರು.