ಕನಕಮಜಲು ಗ್ರಾಮದ ಕನ್ನಡ್ಕ ದಿ. ಕರಿಯಪ್ಪ ಪೂಜಾರಿ ಅವರ ಧರ್ಮಪತ್ನಿ ಶ್ರೀಮತಿ ಲಕ್ಷ್ಮೀ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಅ.4ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು.
ಮೃತರು ಐವರು ಪುತ್ರರಾದ ಬಾಬು ಪೂಜಾರಿ, ಸಂಕಪ್ಪ ಪೂಜಾರಿ, ಸೋಮನಾಥ ಪೂಜಾರಿ, ಗಿರಿಯಪ್ಪ ಪೂಜಾರಿ, ವಿಶ್ವನಾಥ ಪೂಜಾರಿ ಸೇರಿದಂತೆ ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.