ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಬಾಳಿಲ-ಮುಪ್ಪೇರ್ಯ ಮತ್ತು ಜಿಲ್ಲಾ ವೆನ್ ಲಾಕ್ ಆಸ್ಪತ್ರೆ ಪ್ರಾದೇ ರಕ್ತ ಪೂರಣ ಕೇಂದ್ರ ಮಂಗಳೂರು ಇವರ ಸಹಭಾಗಿತ್ವದಲ್ಲಿ ಡಾ. ಪಿ.ಜಿ.ಎಸ್. ಪ್ರಕಾಶ್ ಸಂಸ್ಮರಣೆ ಮ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಅ. 9ರಂದು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಠಾರದಲ್ಲಿ ನಡೆಯಿತು.
ಹಿರಿಯ ವೈದ್ಯ ಡಾ. ಶಶಿಧರ ಪಡೀಲ್ ದ್ವೀಪ ಪ್ರಜ್ವಲನಗೊಳಿಸಿದರು. ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಬಾಳಿಲ-ಮುಪ್ಪೇರ್ಯ ಇದರ ಗೌರವಾಧ್ಯಕ್ಷ ರಾಧಾಕೃಷ್ಣ ರಾವ್ ಯು ಸಭಾಧ್ಯಕ್ಷತೆವಹಿಸಿದ್ದರು. ಕುಂದಾಪುರದ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ತರಬೇತಿ ಅಧಿಕಾರಿಯಾಗಿರುವ ಮೋಹನ್ ಚಂದ್ರ ಪಂಜಿಗಾರು ಸಂಸ್ಮರಣಾ ನುಡಿಗಳನ್ನಾಡಿದರು. ಡಾ. ಪಿ.ಜಿ.ಎಸ್. ಪ್ರಕಾಶರ ಪತ್ನಿ ಶ್ರೀಮತಿ ಲತಾಶಂಕರಿ, ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಬಾಳಿಲ-ಮುಪ್ಪೇರ್ಯ ಇದರ ಅಧ್ಯಕ್ಷ ಶೇಷಪ್ಪ ಪರವ, ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಕಮಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಹಿಳಾ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಯಶೋಧ ಪೊಸೋಡು ಪ್ರಾರ್ಥಸಿದರು. ಸಮಿತಿಯ ಕಾರ್ಯಾಧ್ಯಕ್ಷ ಎ.ಎಂ. ಸುಧಾಕರ ರೈ ಸ್ವಾಗತಿಸಿದರು. ಸಮಿತಿಯ ಸದಸ್ಯ ರಾಜೇಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಸಮಿಯ ಸದಸ್ಯರು, ಊರವರು ಸ್ವಯಂ ರಕ್ತದಾನ ಮಾಡಿದರು.