ಕುಂಟ್ಯಾನ: ಶ್ರೀ ಸದಾಶಿವ ದೇವಸ್ಥಾನದಲ್ಲಿ ಪಾವಂಜೆ ಮೇಳದಿಂದ ಯಕ್ಷಗಾನ ಬಯಲಾಟ

0

ಪುತ್ತೂರು: ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಾ.1ರಂದು ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಫೆ. 28ರಂದು ರಾತ್ರಿ ಪಾವಂಜೆ ಮೇಳದವರಿಂದ ಯಕ್ಷಗಾನ ಬಯಲಾಟ ನಡೆಯಿತು.


ಉದ್ಯಮಿ ಶ್ಯಾಮಸೂರ್ಯ ಮುಳಿಗದ್ದೆ ಮತ್ತು ಮನೆಯವರ ಸೇವಾರ್ತವಾಗಿ ಫೆ.28ರಂದು ಪಾವಂಜೆ ನಾಗವೃಜ ಕ್ಷೇತ್ರ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯಿಂದ ಕಾಲಮಿತಿಯ ಯಕ್ಷಗಾನ ಬಯಲಾಟ ‘ಲಕ್ಷ್ಮೀ ಸ್ವಯಂವರ ಅಂಧಕಮೋಕ್ಷ’ ಪ್ರಸಂಗ ನಡೆಯಿತು. ಸಂಜೆ ಚೌಕಿ ಪೂಜೆಯ ಬಳಿಕ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಮಣ್ಣ ಗೌಡ ಹಲಂಗ ಮತ್ತು ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು. 

LEAVE A REPLY

Please enter your comment!
Please enter your name here