ಮಂಗಳೂರು ಕ್ಯಾಂಪ್ಕೋ ಸಂಸ್ಥೆಯಿಂದ ಚಿಕಿತ್ಸೆಗೆ ಆರ್ಥಿಕ ಧನಸಹಾಯ ವಿತರಣೆ

0

ಆಲಂಕಾರು: ಕ್ಯಾಂಪ್ಕೋ ಸಂಸ್ಥೆ , ಮಂಗಳೂರು ಇದರ ವತಿಯಿಂದ “ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ” ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಮಾ.01ರಂದು ಅಲಂಕಾರು ಕ್ಯಾಂಪ್ಕೋ ಶಾಖೆಯಲ್ಲಿ ನಡೆಯಿತು.

ಕ್ಯಾಂಪ್ಕೋ ಸದಸ್ಯರಾದ ಶ್ರೀ ಅಚ್ಚುತ ಗೌಡ ಪಟ್ರಮೆ ಇವರ ತೆರೆದ ಹೃದಯ ಶಸ್ತ್ರಚಿಕಿತ್ಸೆಗಾಗಿ ಕ್ಯಾಂಪ್ಕೋ ವತಿಯಿಂದ ನೀಡಲಾದ ರೂ. 1,98,500/- ಚೆಕ್ ನ್ನು ಸಂಸ್ಥೆಯ ನಿರ್ದೇಶಕ ಶ್ರೀ ಕೃಷ್ಣ ಪ್ರಸಾದ್ ಮಡ್ತಿಲರವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕ್ಯಾಂಪ್ಕೋ ಸಂಸ್ಥೆಯ ಮುಖ್ಯ ಮಾರುಕಟ್ಟೆ ವ್ಯವಸ್ಥಾಪಕರಾದ ಶ್ರೀ ಗೋವಿಂದ ಭಟ್, ಜನಾರ್ಧನ ಪೂಜಾರಿ ಕದ್ರ , ಕ್ಯಾಂಪ್ಕೋ ಅಲಂಕಾರು ಶಾಖೆಯ ಶಾಖಾಧಿಕಾರಿ ಶ್ರೀ ಉದಯ ಬಿ ಆರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here