ಸುಳ್ಯ ತಾಲೂಕು ಶಿವಳ್ಳಿ ಸಂಪನ್ನದ ವತಿಯಿಂದ ಆಯೋಜಿಸಲ್ಪಟ್ಟ ಕಲಾ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ
ಆರ್ಯಭಟ ಪ್ರಶಸ್ತಿ ಪುರಸ್ಕೃತ ಬೃಂದಾವನ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ ಯವರನ್ನು ಶಿವಳ್ಳಿ ಸಂಪನ್ನದ ವತಿಯಿಂದ ಅ.9 ರಂದು ಸನ್ಮಾನಿಸಲಾಯಿತು.
ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಉಪನ್ಯಾಸಕಿ ವತ್ಸಲರಾಜಿ ಸನ್ಮಾನಿಸಿದರು. ಸಂಪನ್ನದ ಅಧ್ಯಕ್ಷ ಪ್ರವೀಣ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಕಲಾ ರತ್ನ ಪ್ರಶಸ್ತಿ ಪುರಸ್ಕೃತ ಅಬತರ ಖ್ಯಾತಿಯ ನಟಿ ಕು. ಗಾನ ಭಟ್ , ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಂಶುಪಾಲರಾದ ಸುಭಾಷಿಣಿ , ಸಂಚಾಲಕ ಪ್ರಕಾಶ್ ಮೂಡಿತ್ತಾಯ ರವರು ಉಪಸ್ಥಿತರಿದ್ದರು.