ಕೆಪಿಸಿಸಿ ಸಂಯೋಜಕ ಜಿ. ಕೃಷ್ಣಪ್ಪರಿಂದ ಪ್ರೆಸ್ ಕ್ಲಬ್ ಕಟ್ಟಡಕ್ಕೆ 1 ಲಕ್ಷದ 1 ಸಾವಿರ ದೇಣಿಗೆ

0

 

 

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಯೋಜಕ ಜಿ. ಕೃಷ್ಣಪ್ಪ ಕಡಬರವರು ಸುಳ್ಯದ ಅಂಬೆಟಡ್ಕದಲ್ಲಿ ನಿರ್ಮಾಣವಾಗುತ್ತಿರುವ ನೂತನ ಪ್ರೆಸ್ ಕ್ಲಬ್ ಕಟ್ಟಡ ನಿರ್ಮಾಣ ಕಾರ್ಯಕ್ಕೆ 1 ಲಕ್ಷದ 1 ಸಾವಿರ ದೇಣಿಗೆ ನೀಡಿದ್ದಾರೆ.

ಅ.12 ರಂದು ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳರಿಗೆ ಚೆಕ್ ಅನ್ನು ಕೃಷ್ಣಪ್ಪರು ಹಸ್ತಾಂತರಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಸಿ ಜಯರಾಮ್, ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಗೀತಾ ಕೋಲ್ಚಾರ್, ಕಾಂಗ್ರೆಸ್ ಪಕ್ಷದ ಮುಖಂಡರುಗಳು, ಪ್ರೆಸ್ ಕ್ಲಬ್ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ, ಖಜಾಂಜಿ ಯಶ್ವಿತ್ ಕಾಳಮ್ಮನೆ, ಪ್ರೆಸ್ ಕ್ಲಬ್ ನಿರ್ದೇಶಕರು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here