ಸರ್ವೆ: ಕಲ್ಪಣೆ ಗೇರು ತೋಪಿಗೆ ಬೆಂಕಿ-ನಂದಿಸಿದ ಸ್ಥಳೀಯರು

0

ಪುತ್ತೂರು: ಗೇರು ತೋಪಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ಸರ್ವೆ ಗ್ರಾಮದ ಕಲ್ಪಣೆಯಲ್ಲಿ ಮಾ.3ರಂದು ಸಂಜೆ ನಡೆದಿದೆ. ಕಲ್ಪಣೆ ಶಾಲಾ ಸಮೀಪವಿರುವ ಗೇರು ತೋಪಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು ಕ್ಷಣ ಮಾತ್ರದಲ್ಲಿ ಬೆಂಕಿ ವ್ಯಾಪಿಸಿಕೊಂಡಾಗ ಸ್ಥಳೀಯರು ಸೇರಿಕೊಂಡು ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ.

 

ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಮಾಹಿತಿಯನ್ನು ನೀಡಿದ್ದಾರೆ. ಮುಂಡೂರು ಗ್ರಾ.ಪಂ ಸದಸ್ಯ ಮಹಮ್ಮದ್ ಆಲಿ ನೇರೋಳ್ತಡ್ಕ ಹಾಗೂ ಸ್ಥಳೀಯ ಯುವಕರು ಸೇರಿಕೊಂಡು ನೀರು ಹಾಯಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

LEAVE A REPLY

Please enter your comment!
Please enter your name here