ಸತ್ತಿಕಲ್‌ನಲ್ಲಿ ಸ್ಕೂಟರ್, ಬೈಕ್ ಅಪಘಾತ – ಸವಾರ ಗಂಭೀರ

0


ಪುತ್ತೂರು: ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಸತ್ತಿಕಲ್ ಎಂಬಲ್ಲಿ ಸ್ಕೂಟರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಮಾ.3ರಂದು ನಡೆದಿದೆ.
ಸಿಮೆಂಟ್ ಕೆಲಸ ನಿರ್ವಹಿಸುತ್ತಿರುವ ಸ್ಕೂಟರ್ ಸವಾರ ಜೋಸ್ ಮ್ಯಾಥ್ಯೂ ಅವರು ಸ್ಕೂಟರ್ ಚಲಾಯಿಸುತ್ತಾ ಸತ್ತಿಕಲ್‌ನಿಂದ ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕಿಸುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಡಬ ನಿವಾಸಿ ಸೆಲ್ವೇಂದರ್ ಕುಮಾರ್ ಅವರು ಚಲಾಯಿಸುತ್ತಿದ್ದ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಜೋಸ್ ಮ್ಯಾಥ್ಯೂ ಅವರನ್ನು ಮಂಗಳೂರು ಆಸ್ಪತ್ರೆಗೆ ಕೆರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸರು ತೆರಳಿ ಮಾಹಿತಿ ಪಡೆದು ಕೊಂಡಿದ್ದಾರೆ.

LEAVE A REPLY

Please enter your comment!
Please enter your name here