ಕುಕ್ಕೆ ಸುಬ್ರಹ್ಮಣ್ಯದ ಯಶಸ್ವಿನಿ ಆನೆಗೆ ಅರಣ್ಯ ಇಲಾಖೆಯಿಂದ ದೇವಸ್ಥಾನದ ಹೆಸರಿಗೆ ಮಾಲಿಕತ್ವ ಪ್ರಮಾಣ ಪತ್ರ

0

 

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿನಿ ಆನೆಗೆ ಅರಣ್ಯ ಇಲಾಖೆಯಿಂದ ಮಾಲಿಕತ್ವ ಪ್ರಮಾಣ ಪತ್ರ ದೊರೆತಿರುವುದಾಗಿ ವರದಿಯಾಗಿದೆ.

 

ಕಳೆದ 18 ವರ್ಷಗಳಿಂದ ಕುಕ್ಕೆ
ಸುಬ್ರಹ್ಮಣ್ಯದ ದೇವಸ್ಥಾನದಲ್ಲಿ ಆನೆಗೆ ಇದ್ದರೂ ಮಾಲಿಕತ್ವ ಪ್ರಮಾಣ ಪತ್ರ ದೊರೆತಿರಲಿಲ್ಲ. ಇದೀಗ ಮುಂದಿನ 5 ವರ್ಷಗಳ ವರೆಗೆ ಮಾಲಿಕತ್ವ ದೊರೆತಿರುವುದಾಗಿ ಅರಣ್ಯ ಇಲಾಖೆಯ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಕೆಲ ವರ್ಷಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಾಲಿ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಸಚಿವರಾಗಿರುವ ಆನಂದ ಸಿಂಗ್ ಆನೆಯನ್ನು ಕೊಡಮಾಡಿದ್ದರು. ಅರಣ್ಯ ಇಲಾಖೆಯ ಈ ಅನುಮತಿ ಪತ್ರಕ್ಕಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಶ್ರೀವತ್ಸ ಅವರು ಕೆಲಸ ಮಾಡಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here