ಮಂಡೆಕೋಲಿನಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ
ಮಂಡೆಕೋಲು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯುತ್ತಿದ್ದು ಇಂದು ಬೆಳಗ್ಗೆ ಜಿಲ್ಲಾಧಿಕಾರಿಗಳು ಪೇರಾಲಿನಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಸಂಜೀವಿನಿ ಕಟ್ಟಡಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು ಎಪಿಎಂಸಿ ಮಾಜಿ ಅಧ್ಯಕ್ಷ ನಿವೃತ್ತ ಯೋಧ ಅಡ್ಡಂತಡ್ಕ ದೇರಣ್ಣ ಗೌಡ ಗುದ್ದಲಿ ಪೂಜೆ ನೆರವೇರಿಸಿದರು. ಅಲ್ಲಿಂದ ತೆರಳಿದ ಜಿಲ್ಲಾಧಿಕಾರಿಗಳು ಮಾರ್ಗ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾರ್ಗ ಶಾಲೆಯಿಂದ ಮಂಡೆಕೋಲು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ನೂತನ ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸಗೈದರು.