ಬಿಎಮ್ಎಸ್ ಆಟೋ ರಿಕ್ಷಾ ಚಾಲಕರ, ಮಾಲಕರ ಸಂಘದಲ್ಲಿ ಲಂಚ, ಭ್ರಷ್ಟಾಚಾರದ ವಿರುದ್ಧ ಘೋಷಣೆ

0

ಪುತ್ತೂರು: ಸುದ್ದಿ ಜನಾಂದೋಲನ ವೇದಿಕೆ ಮಾರ್ಗದರ್ಶನದಲ್ಲಿ ನಡೆಯತ್ತಿರುವ ಲಂಚ ಭ್ರಷ್ಟಾಚಾರದ ವಿರುದ್ಧದ ಆಂದೋಲನಕ್ಕೆ ಎಲ್ಲಾ ಕಡೆ ಬೆಂಬಲ ವ್ಯಕ್ತವಾಗಿದ್ದು, ಮಾ.5ರಂದು ಬಿಎಮ್ಎಸ್ ಆಟೋ ರಿಕ್ಷಾ ಚಾಲಕರ ಸಂಘದ ತಾಲೂಕು ಘಟಕದ ಮಾಸಿಕ ಸಭೆಯಲ್ಲಿ ಲಂಚ, ಭ್ರಷ್ಟಾಚಾರದ ವಿರುದ್ಧ ಘೋಷಣೆ ಕೂಗಿ ಆಂದೋಲನಕ್ಕೆ ಬೆಂಬಲ ವ್ಯಕ್ತಪಡಿಸಲಾಯಿತು.

ಬಿಎಮ್ಎಸ್ ಆಟೋ ರಿಕ್ಷಾ ಚಾಲಕರ, ಮಾಲಕರ ಸಂಘದ ಮಾಸಿಕ ಸಭೆಯಲ್ಲಿ ಸಂಘದ ಅಧ್ಯಕ್ಷ ರಾಜೇಶ್ ಮರೀಲ್ ಫಲಕ ಹಿಡಿದು ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ದಿನೇಶ್ ಗೌಡ, ಮಾಜಿ ಗೌರವಾಧ್ಯಕ್ಷ ದೇವಪ್ಪ ಗೌಡ, ಜಿಲ್ಲಾ ಮಾಜಿ ಉಪಾಧ್ಯಕ್ಷ ವಾಲ್ಟರ್ ರೆಬೆಲ್ಲೋ, ಮಾಜಿ ಅಧ್ಯಕ್ಷ ಹುಸೈನ್, ಸಂಪ್ಯ ಘಟಕದ ಅಧ್ಯಕ್ಷ ಅಶೋಕ್, ನಗರ ಪಾರ್ಕ್ ನ ಅಧ್ಯಕ್ಷ ಹೇಮಂತ್, ನಝೀರ್ ಮರೀಲ್, ಮಹಾಲಿಂಗ ಆದರ್ಶ ಪಾರ್ಕ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here