ಗುತ್ತಿಗಾರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯು ಸುವರ್ಣ ಮಹೋತ್ಸವ ಆಚರಿಸುತ್ತಿದ್ದು ಇದರ ಆಚರಣೆಯ ಸಲುವಾಗಿ ಧನಸಂಗ್ರಹಕ್ಕೆ ಇಂದು ಚಾಲನೆ ನೀಡಲಾಯಿತು.
ಗುತ್ತಿಗಾರಿನ ಮುತ್ತಪ್ಪ ತಿರುವಪ್ಪ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಧನ ಸಂಗ್ರಹ ಕಾರ್ಯ ಆರಂಭ ಮಾಡಲಾಯಿತು. ಈ ಸಂದರ್ಭ ಸುವರ್ಣ ಮಹೋತ್ಸವ ಆಚರಣಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.