ಶ್ರೀವರ ಯುವಕ ಮಂಡಲದ  ನೂತನ ನೂತನ ಪದಾಧಿಕಾರಿಗಳ ಪದಗ್ರಹಣ

0

ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಶ್ರೀವರ ಯುವಕ ಮಂಡಲದ  ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಯುವಕ ಮಂಡಲದ ವತಿಯಿಂದ ಬೃಹತ್ ರಕ್ತದಾನ ಶಿಬಿರ, ಉಚಿತ ಮಧುಮೇಹ, ರಕ್ತದೊತ್ತಡ ಮತ್ತು ರಕ್ತದ ಗುಂಪು ಪರೀಕ್ಷೆ ಅಲ್ಲದೇ ಉಚಿತ ಇ ಶ್ರಮ್ ಕಾರ್ಡ್, ಆಯುಷ್ಮಾನ್ ಕಾರ್ಡ್ ನೋಂದಣಿ ಹಾಗೂ ವಿತರಣೆ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಕಾರ್ಯಕ್ರಮಗಳು ನಡೆಯಿತು.


ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಟ್ಲಪಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ  ರೇಷ್ಮಾಶಂಕರಿ ಬಲಿಪಗುಳಿ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ನಿಕಟಪೂರ್ವ ಜಿಲ್ಲಾ ಲಯನ್ಸ್ ಗವರ್ನರ್ ಡಾ. ಗೀತಾಪ್ರಕಾಶ್ ಎ ನಡೆಸಿಕೊಟ್ಟರು. 

ವಿಟ್ಲಪಡ್ನೂರು ಗ್ರಾಮ ಪಂಚಾಯತ್ ಉಪಾದ್ಯಕ್ಷ ನಾಗೇಶ್ ಶೆಟ್ಟಿ ಕೊಡಂಗಾಯಿ, ಮಾಜಿ ಅಧ್ಯಕ್ಷ ರವೀಶ್ ಶೆಟ್ಟಿ ಕರ್ಕಳ, ಶ್ರೀಮಲರಾಯಿ ದೈವಸ್ಥಾನ ಸೇವಾ ಟ್ರಸ್ಟ್ ಪೂರ್ಲಪ್ಪಾಡಿ ಇದರ ಅಧ್ಯಕ್ಷ ರಾಮಣ್ಣ ಗೌಡ ದೇವರಮನೆ ,ಮಾಜಿ ತಾಲೂಕು ಪಂಚಾಯತ್ ಸದಸ್ಯೆ ದರ್ಮಾವತಿ ದೇವರಮನೆ, ಲೋಕೋಪಯೋಗಿ ಇಲಾಖೆ ಗುತ್ತಿಗೆದಾರ ಸಂಜೀವ ಪೂಜಾರಿ ಎನ್, ಶ್ರೀವರ ಯುವಕ ಮಂಡಲದ ಗೌರವಾಧ್ಯಕ್ಷ  ಈಶ್ವರಭಟ್ ಪಿ,  ಅಧ್ಯಕ್ಷ ಜಯಂತ್ ಪೂರ್ಲಪ್ಪಾಡಿ, ವಿಟ್ಲ ಪಡ್ನೂರು ಗ್ರಾ.ಪಂ. ಸದಸ್ಯೆ ಜಯಲಕ್ಷ್ಮಿ .ಕೆ, ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ಇಬ್ಬರು ಸಾಧಕರನ್ನು ಸನ್ಮಾನಿಸಲಾಯಿತು. ಮೂವರನ್ನು ಗೌರವಿಸಲಾಯಿತು. ಶ್ರೀವರ ಯುವಕ ಮಂಡಲದ ಲಾಂಛನವನ್ನು ಬಿಡುಗಡೆ ಮಾಡಲಾಯಿತು. ಮಾಳವಿ, ಗೌತಮಿ, ಯಶಸ್ವಿನಿ ಪ್ರಾರ್ಥಿಸಿದರು. ಗ್ರಾ.ಪಂ.  ಸದಸ್ಯ ಜಯಂತ್ .ಪಿ ಪ್ರಾಸ್ತಾವಿಕ ಮಾತುಗಳನ್ಮಾಡಿದರು. ಗಿರೀಶ್ ಸ್ವಾಗತಿಸಿ, ಹರೀಶ್ ವಿಟ್ಲ ವಂದಿಸಿದರು.

LEAVE A REPLY

Please enter your comment!
Please enter your name here