ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗ್ಗಲಡ್ಕ ಇದರ ವಾರ್ಷಿಕ ಮಹಾಸಭೆ ಅ.16 ದುಗ್ಗಲಡ್ಕದ ಮಿತ್ರ ಯುವಕ ಮಂಡಲದ ಕಟ್ಟಡದಲ್ಲಿ ನಡೆಯಿತು.
ಕುರಲ್ ತುಳುಕೂಟದ ಸಂಚಾಲಕ ಕೆ.ಟಿ.ವಿಶ್ವನಾಥ, ಪ್ರ.ಕಾರ್ಯದರ್ಶಿ ನವ್ಯ ದಿನೇಶ್ ಕೊಯಿಕುಳಿ, ಕೋಶಾಧಿಕಾರಿ ಮನೋಜ್ ಪಾನತ್ತಿಲ, ಮಿತ್ರ ಯುವಕ ಮಂಡಲದ ಅಧ್ಯಕ್ಷ ದಿನೇಶ್ ಕೊಯಿಕುಳಿ, ಕಾರ್ಯದರ್ಶಿ, ಅಕ್ಷಯ್ ಮೂಡೆಕಲ್ಲು, ಕೋಶಾಧಿಕಾರಿ ಚಿದಾನಂದ ಕೊಯಿಕುಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವರದಿ ವಾಚನ, ಜಮಾಖರ್ಚಿನ ಲೆಕ್ಕಪತ್ರ ಮಂಡನೆ, ನೂತನ ಪದಾಧಿಕಾರಿಗಳ ಆಯ್ಕೆ,ಅಧಿಕಾರ ಹಸ್ತಾಂತರ ನಡೆಯಿತು.
ಭವಾನಿಶಂಕರ ಕಲ್ಮಡ್ಕ ಕಾರ್ಯಕ್ರಮ ನಿರೂಪಿಸಿದರು.