ಹಿಂದುತ್ವದ ರಕ್ಷಣೆಗೆ ಹೋರಾಟ ನಿರಂತರ ; ಸತ್ಯಜಿತ್

0

ಇಂದು ಸುಳ್ಯಕ್ಕೆ ಭೇಟಿ ನೀಡಿದ ಹಿಂದುಪರ ಹೋರಾಟಗಾರ ಸತ್ಯಜಿತ್ ಸುರತ್ಕಲ್ ಸುದ್ದಿಯೊಂದಿಗೆ ಮಾತನಾಡಿ, “ಮುಂದಿನ ಲೋಕಸಭಾ ಚುನಾವಣೆಗೆ ನಾನು ಆಕಾಂಕ್ಷಿ ಅಲ್ಲ. ಆದರೆ ಕಾರ್ಯಕರ್ತರಿಗೆ ನಾನು ಮತ್ತೆ ರಾಜಕೀಯಕ್ಕೆ ಬರಬೇಕೆಂದು ಅಪೇಕ್ಷೆ ಪಟ್ಟಿದ್ದಾರೆ. ಅದನ್ನು ಪಕ್ಷ ಯಾವ ರೀತಿ ಸ್ವೀಕರಿಸುತ್ತದೆ ಎನ್ನುವುದು ಪಕ್ಷಕ್ಕೆ ಬಿಟ್ಟ ವಿಚಾರ. ಬಿಜೆಪಿಯಲ್ಲಿ ಸೀಟು ದೊರೆಯಲು ಹಿಂದುತ್ವ ಒಂದೇ ಮಾನದಂಡ ಅಲ್ಲ ಎನ್ನುವ ಮಾತು ಯಾವಾಗ ಬಂತೋ ಅಲ್ಲಿಂದ ಪಕ್ಷದೊಳಗಿರುವ ಹಿಂದುತ್ವದ ಕಾರ್ಯಕರ್ತರಿಗೆ ಹಾಗು ಹಿಂದುಳಿದ ವರ್ಗದ ಬಂಧುಗಳಿಗೆ ಅನ್ಯಾಯ ಆಗುತ್ತಿದೆ ಎಂದು ನನಗನಿಸುತ್ತಿದೆ. ಆದ್ದರಿಂದ ಹಿಂದುತ್ವದ ಕಾರ್ಯಕರ್ತರಿಗೆ ಮತ್ತು ಹಿಂದುಳಿದ ವರ್ಗದವರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ನನ್ನ ಹೋರಾಟ ನಿರಂತರ ಎಂದು ಹೇಳಿದರು.

 

 

LEAVE A REPLY

Please enter your comment!
Please enter your name here