ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಬಳ್ಪ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಅ.16ರಂದು ನಡೆಯಿತು .
ಸಂಪನ್ಮೂಲ ವ್ಯಕ್ತಿಯಾಗಿ ಸದಾನಂದ ಆಸ್ಪತ್ರೆಯ ದಂತ ವೈಧ್ಯ ಡಾ.ಚರಣ್ ಶೆಟ್ಟಿ ಉಪಸ್ಥಿತರಿದ್ದರು. ದಂತ ವೈಧ್ಯರುಗಳಾದ ಡಾ.ಶ್ರೇಯಸ್ ಗೌಡ, ಡಾ.ಅನೂಪ್ ಕೃಷ್ಣ ಮುಖ್ಯ ಅತಿಥಿಗಳಾಗಿದ್ದರು. ರೆಡ್ ಕ್ರಾಸ್ ಸಂಯೋಜನಾಧಿಕಾರಿ ಶೃತಿ ಯಾಲದಾಳು, ಎನ್ ಎಸ್ ಎಸ್ ಯೋಜನಾಧಿಕಾರಿ ಸೌಮ್ಯಾ ದಿನೇಶ್ ವೇದಿಕೆಯಲ್ಲಿದ್ದರು. ಸಭಾ ಕಾರ್ಯಕ್ರಮ ಬಳಿಕ ಎನ್ ಎಸ್ ಎಸ್ ಶಿಬಿರಾರ್ಥಿಗಳು, ರೆಡ್ ಕ್ರಾಸ್ ಸದಸ್ಯರು, ಬಳ್ಪ ಶಾಲಾ ವಿದ್ಯಾರ್ಥಿಗಳು ಊರವರು ಸೇರಿದಂತೆ ಸುಮಾರು 400ಕ್ಕೂ ಅಧಿಕ ಮಂದಿಗೆ ಉಚಿತ ದಂತ ಚಿಕಿತ್ಸೆ ನೆರವೇರಿತು.