ಪಾಪೆಮಜಲು ಪ್ರೌಢಶಾಲೆಯಲ್ಲಿ ಪರೀಕ್ಷಾ ತಯಾರಿ ತರಬೇತಿ

0

ಪುತ್ತೂರು : ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿಭಾಗ ಮತ್ತು ಸರಕಾರಿ ಪ್ರೌಢ ಶಾಲೆ ಪಾಪೆಮಜಲು ಇದರ ಸಂಯುಕ್ತ ಆಶ್ರಯದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಎಂಬ ವಿಷಯದಲ್ಲಿ ತರಬೇತಿ ಕಾರ್ಯಕ್ರಮ ಪಾಪೆಮಜಲು ಪ್ರೌಢಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಪಾಪೆಮಜಲು ಪ್ರೌಢಶಾಲಾ ಮುಖ್ಯೋಪಾಧ್ಯಾಯ ಮೋನಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಅಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ತಿಲಕ ರೈ ಕುತ್ಯಾಡಿ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜುನ ಸಹಾಯಕ ಪ್ರಾಧ್ಯಾಪಕ ದೀಕ್ಷಿತ್ ಕುಮಾರ್ ಮಾತನಾಡಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡಿ, ಪರೀಕ್ಷೆಯ ಪೂರ್ವತಯಾರಿ ಬಗ್ಗೆ ವಿವರಿಸಿದರು. ಕಾಲೇಜಿನ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಡಾ. ನಿರೀಕ್ಷಣ್ ಸಿಂಗ್ ಗೌಗಿ ಮತ್ತು ಸಹಾಯಕ ಪ್ರಾಧ್ಯಾಪಕ ಡಾ.ದೇವರಾಜ್ ಆರ್. ಮಾತನಾಡಿ ಶುಭಹಾರೈಸಿದರು. ಸಮಾಜ ಕಾರ್ಯ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಅವಿನಾಶ್ ಸ್ವಾಗತಿಸಿ, ತಿರುಮಲೇಶ್ವರ ವಂದಿಸಿದರು. ರಂಜಿತ್ ಬಿ. ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಸಹಕರಿಸಿದರು. ವಿದ್ಯಾರ್ಥಿಗಳಾದ ಪ್ರೀತಿ ಕಾಮತ್ ಮತ್ತು ಬಳಗ ಪ್ರಾರ್ಥಿಸಿದರು.

LEAVE A REPLY

Please enter your comment!
Please enter your name here