ಅರಂತೋಡು ಜಮಾಅತ್ನ ದುಬೈ ಸಮಿತಿ ವತಿಯಿಂದ ಕೊಡುಗೆಯಾಗಿ ನೀಡಿದ ಪ್ರಿಂಟರನ್ನು ಅರಂತೋಡು ಬದ್ರಿಯಾ ಜುಮಾ ಮಸೀದಿಗೆ ಹಿರಿಯರಾದ ಹಾಜಿ ಎ ಅಹಮ್ಮದ್ ಕುಂಇ ಪಟೇಲ್ ರವರು ಅಕ್ಟೊಬರ್ 21 ರಂದು ಜಮಾ ಅತ್ ಅಧ್ಯಕ್ಷ ಅಶ್ರಫ್ ಗುಂಡಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಖತೀಬರಾದ ಅಲ್ ಹಾಜ್ ಇಸಾಕ್ ಬಾಖವಿ,ಉಪಾಧ್ಯಕ್ಷ ಹಾಜಿ ಕೆ.ಎಂ ಮಹಮ್ಮದ್, ಹಾಜಿ ಬಾಬಾ ತೆಕ್ಕಿಲ್, ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್, ಕಾರ್ಯದರ್ಶಿ ಕೆ.ಎಂ ಮೂಸಾನ್, ಮಾಜಿ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್,ಜೊತೆ ಕಾರ್ಯದರ್ಶಿಗಳಾದ ಎ. ಹನೀಫ್ ಅಮೀರ್ ಕುಕ್ಕುಂಬಳ, ನಿರ್ದೇಶಕ ಕೆ.ಎಂ ಮೊಯಿದು ಕುಕ್ಕುಂಬಳ, ಸಾಜಿದ್ ಅಝ್ಹರಿ, ಅಬ್ದುಲ್ ರಹೆಮಾನ್ ಪಟೇಲ್ ಮೊದಲಾದವರು ಉಪಸ್ಥಿತರಿದ್ದರು.