ಗುತ್ತಿಗಾರು : ಪದವಿಪೂರ್ವ ಕಾಲೇಜು ರಸ್ತೆ ಕಾಂಕ್ರೀಟಿಕರಣಕ್ಕೆ ಸಚಿವ ಅಂಗಾರರಿಂದ ಗುದ್ದಲಿ ಪೂಜೆ

0

 

ಗುತ್ತಿಗಾರು ಪದವಿಪೂರ್ವ ಕಾಲೇಜು ರಸ್ತೆ ಕಾಂಕ್ರೀಟಿಕರಣಕ್ಕೆ ಇಂದು ಸಚಿವ ಎಸ್ ಅಂಗಾರ ಗುದ್ದಲಿ ಪೂಜೆ ನೇರವೇರಿಸಿದರು. ಗುತ್ತಿಗಾರು ಪ್ರೌಢಶಾಲೆ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ರಸ್ತೆ ಕಾಂಕ್ರೀಟ್ ಗೆ 5 ಲಕ್ಷ ಅನುದಾನ ಇರಿಸಲಾಗಿದೆ.

ಈ ಸಂದರ್ಭ ಗುತ್ತಿಗಾರು ಗ್ರಾ.ಪಂ ಅಧ್ಯಕ್ಷೆ ರೇವತಿ ಅಚಳ್ಳಿ, ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಕೇಂದ್ರ ರಬ್ಬರ್ ಮಂಡಳಿಯ ಸದಸ್ಯ ಮುಳಿಯ ಕೇಶವ ಭಟ್, ಬಿಜೆಪಿ ದ.ಕ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಗುತ್ತಿಗಾರು ಪ್ರೌಢಶಾಲಾ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ದಯಾನಂದ ಮುತ್ಲಾಜೆ, ಪ್ರಧಾನ ಕಾರ್ಯದರ್ಶಿ ಲೊಕೇಶ್ವರ ಡಿ ಆರ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಇಂಜಿನಿಯರ್ ಮಣಿಕಂಠ, ಗ್ರಾ.ಪಂ ಉಪಾಧ್ಯಕ್ಷೆ ಪ್ರಮೀಳಾ ಭಾಸ್ಕರ್, ಜಯಪ್ರಕಾಶ್ ಮೊಗ್ರ, ರಾಧಾಕೃಷ್ಣ ತುಪ್ಪದಮನೆ, ವಿಜಯ ಚಾರ್ಮತ, ಮಾಯಿಲಪ್ಪ ಕೊಂಬೆಟ್ಟು, ಹರೀಶ್ ಕೊೈಲ, ಜಗದೀಶ ಬಾಕಿಲ, ಲತಾ ಆಜಡ್ಕ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆನಂದ ಕೆಂಬಾರೆ,  ಮತ್ತಿತರರು ಉಪಸ್ಥಿತರಿದ್ದರು.


ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಚೆನ್ನಮ್ಮ ಸ್ವಾಗತಿಸಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ನೆಲ್ಸನ್‌ ವಂದಿಸಿದರು. ಶಾಲಾ ವಿದ್ಯಾರ್ಥಿಗಳು, ಪೋಷಕರು, ಎಸ್ ಡಿ ಎಂ ಸಿ ಯವರು, ಹಳೆ ವಿದ್ಯಾರ್ಥಿ ಸಂಘದವರು, ಗ್ರಾ.ಪಂ ಸದಸ್ಯರು, ಸುವರ್ಣ ಮಹೋತ್ಸವ ಸಮಿತಿ ಸದಸ್ಯರು , ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here