ಕೊಣಾಲು: ಹಾವು ಕಡಿದು ಗ್ರಾ.ಪಂ.ಮಾಜಿ ಸದಸ್ಯೆ ನಿಧನ

0

ನೆಲ್ಯಾಡಿ: ರಬ್ಬರ್ ಟ್ಯಾಪಿಂಗ್‌ಗೆ ಹೋಗಿದ್ದ ವೇಳೆ ವಿಷಕಾರಿ ಹಾವು ಕಡಿದು ಗ್ರಾ.ಪಂ.ಮಾಜಿ ಸದಸ್ಯೆಯೋರ್ವರು ಮೃತಪಟ್ಟ ಘಟನೆ ಕೊಣಾಲು ಗ್ರಾಮದಲ್ಲಿ ನಡೆದಿದೆ.
ಗೋಳಿತ್ತೊಟ್ಟು ಗ್ರಾ.ಪಂ.ಮಾಜಿ ಸದಸ್ಯೆ, ಕೊಣಾಲು ಗ್ರಾಮದ ಆರ್ಲ ನಿವಾಸಿ ರೋಸಮ್ಮ ಪಿ.ಡಿ.ಯಾನೆ ವಲ್ಸಮ್ಮ(೫೨ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ. ರೋಸಮ್ಮರವರು ಮಾ.೧೧ರಂದು ರಾತ್ರಿ ತಮ್ಮದೇ ರಬ್ಬರ್ ತೋಟದಲ್ಲಿ ಟ್ಯಾಪಿಂಗ್‌ಗೆ ಹೋಗಿದ್ದ ವೇಳೆ ಅವರಿಗೆ ವಿಷಕಾರಿ ಹಾವೊಂದು ಕಡಿದಿದೆ. ಇದು ಗಮನಕ್ಕೆ ಬರುತ್ತಿದ್ದಂತೆ ರೋಸಮ್ಮರವರು ಅಲ್ಲಿಂದ ಪಕ್ಕದ ಮನೆಗೆ ಬಂದಿದ್ದು ಅಲ್ಲಿ ಕುಸಿದು ಬಿದ್ದರು. ತಕ್ಷಣ ಅವರನ್ನು ನೆಲ್ಯಾಡಿಯ ಆಸ್ಪತ್ರೆಯೊಂದಕ್ಕೆ ಕರೆತರಲಾಯಿತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ವರದಿಯಾಗಿದೆ. ಮೃತರ ಮನೆಗೆ ಜಿ.ಪಂ.ಮಾಜಿ ಸದಸ್ಯ ಸರ್ವೋತ್ತಮ ಗೌಡ, ತಾ.ಪಂ.ಮಾಜಿ ಸದಸ್ಯೆ ಉಷಾ ಅಂಚನ್, ಗೋಳಿತ್ತೊಟ್ಟು ಗ್ರಾ.ಪಂ.ಅಧ್ಯಕ್ಷ ಜನಾರ್ದನ ಪಟೇರಿ, ಸದಸ್ಯರಾದ ನೋಣಯ್ಯ ಗೌಡ, ವಿ.ಸಿ.ಜೋಸೆಫ್ ಸೇರಿದಂತೆ ಹಲವು ಮಂದಿ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here