ಜಟ್ಟಿಪಳ್ಳದಲ್ಲಿ ತಲೆಗೆ ಗುಂಡು ಹಾರಿಸಿಕೊಂಡ ಕೇಶವ ಪ್ರಭು

0

 

 

ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ರವಾನೆ

ಸುಳ್ಯ ನಗರ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾದ ಶಾಂತಿ ಪ್ರಭುರವರ ಪತಿ ಸುಳ್ಯದ ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭುರವರು ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಇಂದು ಪೂರ್ವಾಹ್ನ 11 ಗಂಟೆಯ ಸುಮಾರಿಗೆ ಅವರ ಮನೆಯೊಳಗೆ ಈ ಘಟನೆ ನಡೆದಿದ್ದು, ವಿಷಯ ತಿಳಿದ ಕೂಡಲೇ ಆಸ್ಪತ್ರೆಗೆ ರವಾನಿಸಲಾಯಿತು. ಕೇಶವ ಪ್ರಭುರವರ ಈಗಿನ ಸ್ಥಿತಿ ಗೊತ್ತಾಗಿಲ್ಲ. ಗುಂಡು ಹಾರಿಸಿಕೊಳ್ಳಲು ಕಾರಣವೇನೆಂಬ ಬಗ್ಗೆ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

LEAVE A REPLY

Please enter your comment!
Please enter your name here