ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಅಷ್ಟಮಂಗಲ ಪ್ರಶ್ನೆ ಚಿಂತನೆಯಲ್ಲಿ ದೈವಜ್ಞರು ನಿರ್ದೆಶಿದಂತೆ ನಿವೃತಿ ಪರಿಹಾರಕ್ಕಾಗಿ ಮಾ.14ರಂದು ಕಾಶಿ ಮತ್ತು ಉಜೈನಿ ಕ್ಷೇತ್ರಕ್ಕೆ ತೆರಳುವ ನಿಟ್ಟಿನಲ್ಲಿ ಬೆಳಿಗ್ಗೆ ದೇವಳದಲ್ಲಿ ಪ್ರಾರ್ಥನೆ ನಡೆಯಿತು.
ದೇವಳದ ಪ್ರಧಾನ ಅರ್ಚಕರಾಗಿರುವ ವ್ಯವಸ್ಥಾಪನಾ ಸಮಿತಿ ಸದಸ್ಯ ವೇ ಮೂ ವಿ.ಎಸ್ ಭಟ್ ಅವರು ಸಾಮೂಹಿಕ ಪ್ರಾರ್ಥನೆ ಮಾಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯರಾದ ಡಾ. ಸುಧಾ ಎಸ್ ರಾವ್, ರವೀಂದ್ರನಾಥ ರೈ ಬಳ್ಳಮಜಲು, ರಾಮದಾಸ್ ಗೌಡ, ಶೇಖರ್ ನಾರಾವಿ, ವೀಣಾ ಬಿ.ಕೆ, ಬಿ.ಐತ್ತಪ್ಪ ನಾಯ್ಕ್, ರಾಮಚಂದ್ರ ಕಾಮತ್, ದೇವಳದ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಡಾ.ಶ್ರೀಪತಿ ರಾವ್, ಬಾಲಕೃಷ್ಣ ಮತ್ತು ಅರ್ಚಕರು ಹಾಗು ಭಕ್ತರು ಉಪಸ್ಥಿತರಿದ್ದರು. ದೇವಳದಲ್ಲಿ ಪ್ರಾರ್ಥನೆ ಬಳಿಕ ಕಾಶಿಗೆ ಹೊರಡುವ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರು ಆಗಮಿಸಿದ್ದರು.