![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ವಿವಿಧ ಮಹಿಳಾ ಸಂಘಟನೆಯೊಂದಿಗೆ ಶ್ರೀ ಮಹಾಲಿಂಗೇಶ್ವರ ದೇವಳದ ಸಹಯೋಗದೊಂದಿಗೆ ನಟರಾಜ ವೇದಿಕೆಯಲ್ಲಿ ಬೊಳುವಾರು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದಿಂದ ’ಜಾಂಬವತಿ ಕಲ್ಯಾಣ’ ಯಕ್ಷಗಾನ ತಾಳಮದ್ದಳೆ ನಡೆಯಿತು.
ಹಿಮ್ಮೇಳದಲ್ಲಿ ಭವ್ಯಶ್ರೀ ಕುಲ್ಕುಂದ, ಪದ್ಯಾಣ ಶಂಕರನಾರಾಯಣ ಭಟ್, ಮುರಳೀಧರಕಲ್ಲೂರಾಯ, ಮಾ.ಅಗಸ್ತ್ಯ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀಕೃಷ್ಣ ( ಶುಭಾ ಜೆ ಸಿ ಅಡಿಗ ), ಜಾಂಬವ ( ಕಿಶೋರಿ ದುಗ್ಗಪ್ಪ ನಡುಗಲ್ಲು ), ಬಲರಾಮ ( ಶುಭಾ ಗಣೇಶ್ ), ನಾರದ ( ಪ್ರೇಮಲತಾ ಟಿ.ರಾವ್ ), ಜಾಂಬವತಿ ( ಮನೋರಮ ಜಿ ಭಟ್ ) ಸಹಕರಿಸಿದರು. ಸಂಚಾಲಕ ಭಾಸ್ಕರ್ ಬಾರ್ಯ ಸ್ವಾಗತಿಸಿ, ಉಮಾ ಡಿ.ಪ್ರಸನ್ನಾ ವಂದಿಸಿದರು.