ಸುಳ್ಯ ಕಸಬಾದ ಬೆಟ್ಟಂಪಾಡಿ ನಿವಾಸಿ ಗಬ್ಬಲಡ್ಕ ವೀರಪ್ಪ ಗೌಡ ರವರು ಹೃದಯಾಘಾತದಿಂದ ಅ.24 ರಂದು ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು.
ಮನೆಯಲ್ಲಿ ಇರುವ ವೇಳೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಸುಳ್ಯ ಖಾಸಗಿ ಆಸ್ಪತ್ರೆ ಕರೆ ತಂದು ವೈದ್ಯರ ಸಲಹೆಯಂತೆ ಮಂಗಳೂರಿನ ಆಸ್ಪತ್ರಗೆ ಕರೆದುಕೊಂಡು ಹೋಗುತ್ತಿರುವಾಗ ದಾರಿ ಮಧ್ಯೆ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.
ಮೃತರು ಪತ್ನಿ ಶ್ರೀಮತಿ ಜಾನಕಿ, ಓರ್ವ ಪುತ್ರಿ ಶ್ರೀಮತಿ ಹೇಮಲತಾ ,ಅಳಿಯ ರಂಜನ್ ಪಡ್ಡಂಬೈಲು ಹಾಗೂ ಸಹೋದರಿ, ಮೊಮ್ಮಕ್ಕಳನ್ನು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರು ಹಲವಾರು ವರ್ಷಗಳಿಂದ ಸುಳ್ಯದಲ್ಲಿ ಚಾಲಕ ವೃತ್ತಿ ನಡೆಸುತ್ತಿದ್ದರು.