ಪುತ್ತೂರು: ಮಾ.19ರಂದು ಜರುಗಲಿರುವ ಕಾರ್ಜಾಲು ಶ್ರೀ ಧೂಮಾವತಿ ದೈವದ ವಾರ್ಷಿಕ ದೊಂಪದ ಬಲಿಯ ಅಂಗವಾಗಿ ಮಾ.17ರಂದು ಸಂಜೆ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರ ವಿತರಣೆ ನಡೆಯಲಿದೆ.
ಸಂಜೆ ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಿಂದ ದರ್ಬೆ ತನಕ ಆಮಂತ್ರಣ ಪತ್ರವನ್ನು ವೈಭವದ ಸರ್ವ ವಾದ್ಯಗಳ ಮೂಲಕ ನೀಡಲಾಗುವುದು. ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಮತ್ತು ಕಲ್ಲೇಗ ರೂರಲ್ ಡೆವೆಲಪ್ಮೆಂಟ್ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಸಂಜೀವ ನಾಯಕ್ ಕಲ್ಲೇಗ ಅವರು ಆಮಂತ್ರಣ ಪತ್ರ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ ಎಂದು ದೊಂಪದ ಬಲಿ ನೇಮೋತ್ಸವ ಸಮಿತಿ ಅಧ್ಯಕ್ಷ ಅಜೀತ್ ಕುಮಾರ್ ಜೈನ್ ಅವರು ತಿಳಿಸಿದ್ದಾರೆ.