ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ , ಯುವ ರೆಡ್ ಕ್ರಾಸ್ ಘಟಕ ಹಾಗೂ ಮಹಿಳಾ ಸಬಲೀಕರಣ ಕೋಶ ಗಳ ಆಶ್ರಯದಲ್ಲಿ ಮಹಿಳಾ ಸುರಕ್ಷಾ ಕಾರ್ಯಾಗಾರವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಸುರಕ್ಷಾ ಫಾರ್ ವುಮೆನ್ ಟ್ರಸ್ಟ್ ನವರು ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷ ಕಾರ್ತಿಕ್ ಕಟೀಲ್ ಹಾಗೂ ಶ್ರೀಮತಿ ಶುಭಲತಾ ಸುರೇಶ್ ವಿವಿಧ ಪ್ರಾತ್ಯಕ್ಷಿಕೆಗಳ ಮೂಲಕ ಮಹಿಳೆಯರ ಆತ್ಮ ರಕ್ಷಣೆಯ ತಂತ್ರಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ್ ಕೆ, ಇಲೆಕ್ಟ್ರಾನಿಕ್ಸ್ ವಿಭಾಗ ಮುಖ್ಯಸ್ಥೆ ರಮಾದೇವಿ ಉಪಸ್ಥಿತರಿದ್ದರು. ಗ್ರಂಥಪಾಲಕಿ ಕವಿತಾ ಪಿ.ಡಿ. ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಸಂಸ್ಥೆಯ ಮಹಿಳಾ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡರು.