2022-23 ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ 15 ನೇ ಹಣಕಾಸು ಯೋಜನೆ ಒಗ್ಗೂಡಿಸುವಿಕೆಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಘನತ್ಯಾಜ್ಯ ಘಟಕದ ಬಳಿ ನಿರ್ಮಾಣಗೊಳ್ಳಲಿರುವ NRLM (ಸಂಜೀವಿನಿ ಕಟ್ಟಡ) ನಿರ್ಮಾಣದ ಶಂಕು ಸ್ಥಾಪನೆಯು ಅ.28 ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ , ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ, ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್. ಮನ್ಮಥ, ಪಿ.ಡಿ.ಒ. ಶ್ಯಾಮ್ ಪ್ರಸಾದ್ ಎಂ ಆರ್ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮದ ಪ್ರಮುಖರು, ಸಂಜೀವಿನಿ ಸಂಘದ ಅಧ್ಯಕ್ಷರು,ಉಫಾಧ್ಯಕ್ಷರು ಸದಸ್ಯರು ಹಾಗೂ ನರೇಗಾ ಇಂಜಿನಿಯರ್ , ತಾಲೂಕು ಪಂಚಾಯತ್ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು.