ವಿಶ್ವ ಹಿಂದೂ ಪರಿಷದ್ ಬಜರಂಗದಳ ವಜ್ರಕಾಯ ಶಾಖೆ ಪದವು ಚೊಕ್ಕಾಡಿ ಇದರ ವತಿಯಿಂದ ನ.5 ರಂದು ಪದವು ಮೈದಾನದಲ್ಲಿ ಸಾಮೂಹಿಕ ಗೋಪೂಜೆಯ ಪ್ರಯುಕ್ತ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಸಂಜೆ ಕಾತ್ಯಾಯಿನಿ ಭಜನಾ ಮಂಡಳಿ ಕೆದಿಕಾನ ಇವರಿಂದ ಭಜನೆ,ಬಳಿಕ ಧಾರ್ಮಿಕ ಸಭೆಯು ಹಿರಿಯ ಪ್ರಗತಿಪರ ಕೃಷಿಕ ಗಣಪಯ್ಯ ಆನೆಕಾರ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಒಡಿಯೂರು ಗುರುದೇವದತ್ತ ಸಂಸ್ಥಾನದ ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ವಿ.ಹೆಚ್.ಪಿ.ಅಧ್ಯಕ್ಷ ಸೋಮಶೇಖರ ಪೈಕ, ಬಜರಂಗದಳ ಜಿಲ್ಲಾ ಸಹ ಸಂಯೋಜಕ್ ಲತೀಶ್ ಗುಂಡ್ಯ, ಡಾ.ಪಿ.ಗೋಪಾಲಕೃಷ್ಣ ಪೈಲೂರು, ಬಜರಂಗದಳ ಗೋರಕ್ಷಾ ಪ್ರಮುಖ್ ಅರವಿಂದ ಸುಳ್ಯ, ದುರ್ಗಾವಾಹಿನಿ ಸಂಯೋಜಕಿ ನಮಿತಾ ಪ್ರವೀಣ್ ರಾವ್, ಕುಕ್ಕುಜಡ್ಕ ಸೊಸೈಟಿ ಮಾಜಿ ಅಧ್ಯಕ್ಷ ರಾಘವೇಂದ್ರ ಪಿ.ಕೆ ಉಪಸ್ಥಿತರಿರುವರು. ರಾತ್ರಿ ವಿಠಲ ನಾಯಕ್ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿರುವುದು ಎಂದು ಸಂಘಟಕರು ತಿಳಿಸಿರುತ್ತಾರೆ.