ಯಾದವ ಸಭಾ ತಾಲೂಕು ಸಮಿತಿ ಸುಳ್ಯ ಇದರ ಸಮಾವೇಶವು ದ.25 ರಂದು ಶಿವಕೃಪಾ ಕಲಾಮಂದಿರದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಅ.30 ರಂದು ಶಿವಕೃಪಾ ಕಲಾಮಂದಿರದಲ್ಲಿ ತಾಲೂಕು ಸಮಿತಿ ಅಧ್ಯಕ್ಷ ಕರುಣಾಕರ ಹಾಸ್ಪಾರೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ದ.13 ಅಥವಾ ದ.18 ರಂದು ಸುಳ್ಯದಲ್ಲಿ ನಡೆಯುವ ಯಾದವ ಸಭಾದ ವತಿಯಿಂದ ನಡೆಯುವ ಆಟೋಟ ಸ್ಪರ್ಧೆಯ ಬಗ್ಗೆ, ಸತ್ಯನಾರಾಯಣ ಪೂಜೆ, ಅಭಿನಂದನಾ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರದ ಬಗ್ಗೆ ಚರ್ಚಿಸಲಾಯಿತು. ವೇದಿಕೆಯಲ್ಲಿ ಯಾದವ ಸಭಾ ಕೇಂದ್ರ ಸಮಿತಿಯ ಅಧ್ಯಕ್ಷ ಎ.ಕೆ.ಮಣಿಯಾಣಿ, ಕಾರ್ಯದರ್ಶಿ ಕೃಷ್ಣ ಬೆಟ್ಟ, ತಾಲೂಕು ಸಮಿತಿ ಉಪಾಧ್ಯಕ್ಷ ಕೃಷ್ಣ ಅಕ್ಕಪ್ಪಾಡಿ, ತಾಲೂಕು ಮಹಿಳಾ ವೇದಿಕೆ ಅಧ್ಯಕ್ಷೆ ರಾಜೀವಿ ಪರ್ಲಿಕಜೆ, ಯುವ ವೇದಿಕೆ ಅಧ್ಯಕ್ಷ ವಿನೋದ್ ಕೊಯಿಂಗಾಜೆ ಉಪಸ್ಥಿತರಿದ್ದರು. ಸಭೆಯಲ್ಲಿ ಎಲ್ಲಾ ಪ್ರಾದೇಶಿಕ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಿಳಾ ವೇದಿಕೆಯ ಪದಾಧಿಕಾರಿಗಳು, ಯುವ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಯನ್ನು ನೀಡಿದರು.