ಕುಲಾಲ ಸಮಾಜ ಸೇವಾ ಸಂಘದ ಸತ್ಯನಾರಾಯಣ, ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ಲಂಚ, ಭ್ರಷ್ಠಾಚಾರದ ವಿರುದ್ಧದ ಸುದ್ದಿ ಜನಾಂದೋಲದ ಪ್ರತಿಜ್ಞೆ ಸ್ವೀಕಾರ

0

ಪುತ್ತೂರು; ಕುಲಾಲ ಸಮಾಜ ಸೇವಾ ಸಂಘದಿಂದ ಮಾ.20ರಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಮುದಾಯ ಭವನದಲ್ಲಿ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ರಾಜ್ಯಮಟ್ಟದ ಕಥೆ, ಕವನ, ಮತ್ತು ಪ್ರಬಂಧ ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ ಪ್ರದಾನ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಲಂಚ, ಭ್ರಷ್ಠಾಚಾರದ ವಿರುದ್ಧ ಸುದ್ದಿ ಜನಾಂದೋಲನ ಬೆಂಬಲಿಸಿ ಪ್ರತಿಜ್ಞೆ ಸ್ವೀಕರಿಸಿ, ಘೋಷಣೆ ಕೂಗಿದರು.

ಸಂಘದ ಅಧ್ಯಕ್ಷ ಮಹೇಶ್ ಕೆ. ಸವಣೂರು ಮಾತನಾಡಿ, ಸುದ್ದಿ ಬಿಡುಗಡೆಯು ಲಂಚ, ಭ್ರಷ್ಠಾಚಾರದ ವಿರುದ್ಧ ಜನಾಂದೋಲನವನ್ನು ನಡೆಸುತ್ತಿದೆ. ಈ ಜನಾಂದೋಲನಕ್ಕೆ ಕುಲಾಲ ಸಂಘವು ಸಂಪೂರ್ಣ ಬೆಂಬಲ ನೀಡುತ್ತಿದೆ ಎಂದು ತಿಳಿಸಿ ಪ್ರತಿಜ್ಞಾ ವಿಧಿ ಬೋಧಿಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಸಂಘದ ಗೌರವಾಧ್ಯಕ್ಷ ಬಿ.ಎಸ್ ಕುಲಾಲ್, ಅತಿಥಿಗಳಾಗಿದ್ದ ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಚಿದಂಬರ ಬೈಕಂಪಾಡಿ, ಆನಡ್ಕ ಸರಕಾರಿ ಹಿ.ಪ್ರಾ ಶಾಲಾ ಮುಖ್ಯಗುರು ಶುಭಲತಾ ಹಾರಾಡಿ, ವೀರಮಂಗಲ ಸರಕಾರಿ ಹಿ.ಪ್ರಾ ಶಾಲಾ ಪ್ರಭಾರ ಮುಖ್ಯಗುರು ಹರಿಣಾಕ್ಷಿ ಸೂತ್ರಬೆಟ್ಟು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಸುಮಾರು ೨೦೦ಕ್ಕೂ ಅಧಿಕ ಮಂದಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

LEAVE A REPLY

Please enter your comment!
Please enter your name here