ಕೆವಿಜಿ ಪಾಲಿಟೆಕ್ನಿಕ್ ; ಶಾಶ್ವತ್ ಗೆ ರಾಜ್ಯಮಟ್ಟದ ಮೂರನೇ ರ್ಯಾಂಕ್

0

 

ಕರ್ನಾಟಕ ರಾಜ್ಯ ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯು 2021-22 ನೇ ಸಾಲಿನಲ್ಲಿ ನಡೆಸಿದ ಅಂತಿಮ ವರ್ಷದ ಡಿಪ್ಲೊಮಾ ಪರೀಕ್ಷೆಯಲ್ಕಿ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಶಾಶ್ವತ್ ಕೆ.ಎಸ್ ರಾಜ್ಯ ಮಟ್ಟದಲ್ಲಿ ಮೂರನೇ ರ್ಯಾಂಕ್ ಗಳಿಸಿದ್ದಾರೆ.
ಇವರು ವಿರಾಜಪೇಟೆ ತಾಲೂಕು, ಸಿದ್ದಾಪುರ, ಕರಡಿಗೋಡು ಗ್ರಾಮದ ಕುಕ್ಕುನೂರು ಸೂರಜ್ ಹಾಗೂ ಚಂಚಲ್ ದಂಪತಿಗಳ ಪುತ್ರ.
ಇವರಿಗೆ ಎ.ಓ.ಎಲ್.ಇ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ರೇಣುಕಾಪ್ರಸಾದ್ ಕೆ.ವಿ, ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ. ಮತ್ತು ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ್ ಕೆ ಮತ್ತು ಸಿಬಂಧಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here