![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಉಪ್ಪಿನಂಗಡಿ: ಕಳೆದ ರಾತ್ರಿ ಬೀಸಿದ ಭಾರೀ ಗಾಳಿ ಮಳೆಗೆ ಕಣಿಯೂರು ಗ್ರಾಮದ ಕೆದಿಲ ಮನೆ ನಿವಾಸಿ ವಿದ್ಯಾ ಪರಮೇಶ್ವರಿ ಎಂಬವರ ಮನೆ ಛಾವಣಿ ಕುಸಿದು ಬಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ನಡೆದಿದೆ.
ಗಾಳಿಯ ಹೊಡೆತಕ್ಕೆ ಸಿಲುಕಿ ಮನೆಯ ಛಾವಣಿ ಅರ್ಧಭಾಗ ಕುಸಿದು ಬಿದ್ದಿದ್ದು, ಸುಮಾರು ರೂ. 2 ಲಕ್ಷದಷ್ಟು ನಷ್ಟ ಸಂಭವಿಸಿದ ಬಗ್ಗೆ ಅಂದಾಜಿಸಲಾಗಿದೆ. ಘಟನೆಗೆ ಸಂಬಂಧಿಸಿ ಕಂದಾಯ ಇಲಾಖಾಽಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.