‘
ಪುತ್ತೂರು: ಬಿಜೆಪಿಯ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ರವರು ನವದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ಭೇಟಿಯಾಗಿ ಕರ್ನಾಟಕದಲ್ಲಿ ಏಪ್ರಿಲ್ 16 ಮತ್ತು 17 ರಂದು ನಡೆಯುವ ರಾಜ್ಯ ಬಿಜೆಪಿಯ ಕಾರ್ಯಕಾರಿಣಿಗೆ ಆಹ್ವಾನಿಸಿ, ರಾಜ್ಯದಲ್ಲಿ ಪಕ್ಷ ಸಂಘಟನೆಯ ಮುಂದಿನ ಕಾರ್ಯರೂಪಗಳ ಬಗ್ಗೆ ಚರ್ಚೆ ನಡೆಸಿದರು.